Hero Image

IPL 2024: ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದೇ ಮುಂಬೈ ಇಂಡಿಯನ್ಸ್ಗೆ ಮುಳುವಾಯಿತೆ?

ಹೊಸದಿಲ್ಲಿ: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿದ ಎರಡು ಪಂದ್ಯಗಳಲ್ಲಿ 5 ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಸೋಲು ಅನುಭವಿಸಿದೆ. ಅದರಲ್ಲಿಯೂ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಪರಾಭವಗೊಂಡಿರುವ ಎಲ್ಲರಿಗೂ ಬೇಸರ ಮೂಡಿಸಿದೆ. ಗುಜರಾತ್ ಟೈಟನ್ಸ್‌ ತಂಡವನ್ನು ಕಳೆದ 2022 ಹಾಗೂ 2023ರ ಟೂರ್ನಿಗಳಲ್ಲಿ ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ್ದ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅದೇ ಲಯವನ್ನು ಮುಂದುವರಿಸುವಲ್ಲಿ ಎಡವಿದ್ದಾರೆ.ಗುಜರಾತ್‌ ಟೈಟನ್ಸ್ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ತನ್ನ ಮೊದಲನೇ ಪಂದ್ಯದಲ್ಲಿ ಕಠಿಣ ಹೋರಾಟ ನಡೆಸಿದ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡ 6 ರನ್‌ಗಳಿಂದ ಸೋಲು ಅನುಭವಿಸಿತ್ತು.
ನಂತರ ಬುಧವಾರ ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ತನ್ನ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ 31 ರನ್‌ಗಳಿಂದ ಸೋಲು ಅನುಭವಿಸಿತ್ತು. ಆ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ 9ನೇ ಸ್ಥಾನಕ್ಕೆ ಕುಸಿದಿದೆ. 1. ಡ್ರೆಸ್ಸಿಂಗ್‌ ರೂಂ ವಾತಾವರಣದಲ್ಲಿ ಬದಲಾವಣೆ2024ರ ಐಪಿಎಲ್‌ ಮಿನಿ ಹರಾಜಿಗೂ ಮುನ್ನ ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ತಂಡಕ್ಕೆ ಹಠಾತ್‌ ನಾಯಕನ್ನಾಗಿ ನೇಮಿಸಿದ್ದು ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರರಿಗೂ ಸೇರಿದಂತೆ ಅಭಿಮಾನಿಗಳಿಗೆ ಬೆಸರವನ್ನುಂಟು ಮಾಡಿತ್ತು.
ಹಾರ್ದಿಕ್‌ಗೆ ನಾಯಕತ್ವ ನೀಡಿದ್ದು ತಪ್ಪಲ್ಲ ಆದರೆ, ಈ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ಕನಿಷ್ಠ ರೋಹಿತ್‌ ಶರ್ಮಾ ಅವರ ಬಳಿ ಟೀಮ್‌ ಮ್ಯಾನೇಜ್‌ಮೆಂಟ್‌ ಚರ್ಚೆ ನಡೆಸಬೇಕಾಗಿತ್ತು. ಏಕೆಂದರೆ ಮುಂಬೈಗೆ ರೋಹಿತ್ ತಮ್ಮ ನಾಯಕತ್ವದಲ್ಲಿ 5 ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ. ಐಪಿಎಲ್‌ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ನಾಯಕನಾಗಿರುವ ರೋಹಿತ್‌ ಶರ್ಮಾ ಅವರನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಒಮ್ಮೆ ಕರೆದು ಮಾತನಾಡಬೇಕಾಗಿತ್ತು. ಏಕಾಏಕಿ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕನ್ನಾಗಿ ಮಾಡಿದ್ದು ಮುಂಬೈ ಇಂಡಿಯನ್ಸ್‌ ಡ್ರೆಸ್ಸಿಂಗ್‌ ರೂಂನಲ್ಲಿನ ವಾತಾವರಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.
2. ಆಟಗಾರರಿಂದ ಬೆಂಬಲದ ಕೊರತೆಒಂದು ತಂಡಕ್ಕೆ ನಾಯಕ ತುಂಬಾ ನಿರ್ಣಾಯಕವಾಗುತ್ತದೆ. ಏಕೆಂದರೆ ತಂಡ ಯಶಸ್ಸು ಹಾಗೂ ವೈಫಲ್ಯ ಎರಡೂ ಕೂಡ ನಾಯಕನನ್ನು ಅವಲಂಬಿಸಿರುತ್ತದೆ. ಆದ್ದರಿಂದ ನಾಯಕನಾದವನು ಪ್ರಶ್ನಾತೀತವಾಗಿರಬೇಕಾಗುತ್ತದೆ. ಆದರೆ, ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ಗೆ ನಾಯಕನನ್ನಾಗಿ ನೇಮಿಸಿದ್ದು ಸ್ವತಃ ತಂಡದ ಆಟಗಾರರಿಗೇ ಇಷ್ಟವೆಲ್ಲಂಬುದು ಈಗಾಗಲೇ ಸಾಬೀತಾಗಿದೆ. ಜಸ್‌ಪ್ರೀತ್ ಬುಮ್ರಾ, ಸೂರ್ಯಕುಮಾರ್‌ ಯಾದವ್ ಅವರಂಥ ಹಿರಿಯ ಆಟಗಾರರು ಈ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಆದರೆ, ಒಮ್ಮೆ ರೋಹಿತ್ ಶರ್ಮಾ ಜೊತೆ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆ ನಡೆಸಿ ನಂತರ ಹಾರ್ದಿಕ್‌ಗೆ ಮಣೆ ಹಾಕಿದ್ದರೆ ಹಿರಿಯ ಆಟಗಾರರಿಗೂ ಒಂದು ಸಮಾಧಾನ ಇರುತ್ತಿತ್ತು.
ಆದರೆ, ಮುಂಬೈ ಫ್ರಾಂಚೈಸಿ ಇದ್ಯಾವುದನ್ನೂ ಮಾಡಲೇ ಇಲ್ಲ. ಇದು ಕೂಡ ತಂಡದ ಪ್ರದರ್ಶನದ ಮೇಲೆ ಗಂಭೀರ ಪರಿಣಾಮ ಬೀರಿದೆ. 3. ಹಾರ್ದಿಕ್‌ ಪಾಂಡ್ಯ ಮೇಲೆ ಹೆಚ್ಚಿದ ಒತ್ತಡ ಗುಜರಾತ್‌ ಟೈಟನ್ಸ್‌ ತಂಡದ ನಾಯಕನಾಗಿದ್ದ ವೇಳೆ ಹಾರ್ದಿಕ್ ಪಾಂಡ್ಯ ಅವರೇ ಆಟಗಾರನಾಗಿಯೂ ಯಶಸ್ವಿಯಾಗಿದ್ದರು. ಸನ್ನಿವೇಶಕ್ಕೆ ತಕ್ಕಂತೆ ಅಗ್ರ ಕ್ರಮಾಂಕದಲ್ಲಿಯೂ ಆಡುತ್ತಿದ್ದ ಹಾರ್ದಿಕ್‌ ಸಕ್ಸಸ್‌ ಆಗಿದ್ದರು ಹಾಗೂ ಬೌಲಿಂಗ್‌ನಲ್ಲಿಯೂ ಹೊಸ ಚೆಂಡಿನಲ್ಲಿ ಯಶಸ್ಸು ಪಡೆದಿದ್ದರು. ಆದರೆ, ಮುಂಬೈ ಇಂಡಿಯನ್ಸ್‌ಗೆ ಬಂದ ಬಳಿಕ ಅದೇ ಪರಂಪರೆಯನ್ನು ಮುಂದುವರಿಸುವಲ್ಲಿ ಎಡವಿದ್ದಾರೆ. ಕಳೆದ ಎರಡೂ ಪಂದ್ಯಗಳಲ್ಲಿ ಹಾರ್ದಿಕ್‌ ಪಾಂಡ್ಯ ಅವರನ್ನು ಗಮನಿಸಿದರೆ, ಅವರು ಮುಂಬೈ ತಂಡದಲ್ಲಿ ಒತ್ತಡವನ್ನು ಅನುಭವಿಸುತ್ತಿದ್ದಾರೆ.
ಇದರಿಂದಾಗಿ ನಾಯಕನಾಗಿ ಅಲ್ಲದೆ ಆಟಗಾರನಾಗಿಯೂ ಹಾರ್ದಿಕ್‌ ಪಾಂಡ್ಯ ವೈಫಲ್ಯ ಅನುಭವಿಸುತ್ತಿದ್ದಾರೆ. ಒತ್ತಡದಿಂದಾಗಿ ನಾಯಕನಾಗಿ ಬೌಲಿಂಗ್‌, ಬ್ಯಾಟಿಂಗ್‌ ಹಾಗೂ ಫೀಲ್ಡಿಂಗ್‌ಗೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದಲೇ ಬುಧವಾರ ಸನ್‌ರೈಸರ್ಸ್ ಹೈದರಾಬಾದ್‌ ಬ್ಯಾಟ್ಸ್‌ಮನ್‌ಗಳ ಎದುರು ಸೂಕ್ತ ರಣತಂತ್ರ ರೂಪಿಸುವಲ್ಲಿ ಹಾರ್ದಿಕ್‌ ವಿಫಲರಾಗಿದ್ದರು. 4. ಅಭಿಮಾನಿಗಳ ಅಸಮಾಧಾನಕ್ಕೆ ಕಾರಣಮುಂಬೈ ಇಂಡಿಯನ್ಸ್‌ಗೆ ಹಾರ್ದಿಕ್‌ ಪಾಂಡ್ಯ ಅವರನ್ನು ಏಕಾಏಕಿ ನಾಯಕನನ್ನಾಗಿ ನೇಮಕ ಮಾಡಿದ್ದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
ಇದು ಮೈದಾನದಲ್ಲಿನ ಸಕಾರಾತ್ಮಕ ವಾತಾವರಣದ ಮೇಲೆ ಗಂಭೀರ ಪರಿಣಾಮ ಬೀರಿದೆ. ಗುಜರಾತ್‌ ಟೈಟನ್ಸ್‌ ವಿರುದ್ದದ ಪಂದ್ಯದಲ್ಲಿ ಇದು ಸಾಬೀತಾಗಿತ್ತು. ಸ್ವತಃ ಮುಂಬೈ ಇಂಡಿಯನ್ಸ್ ಅಭಿಮಾನಿಗಳೇ ಹಾರ್ದಿಕ್‌ ಪಾಂಡ್ಯ ಅವರನ್ನು ಟ್ರೋಲ್‌ ಮಾಡಿದ್ದರು. ಈ ರೀತಿಯ ನಕಾರಾತ್ಮಕ ವಾತಾವರಣ ತಂಡದ ಪ್ರದರ್ಶನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರಿಂದ ಆಟಗಾರರು ಕೂಡ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗುವುದಿಲ್ಲ. ಒಂದು ತಂಡ ಮೈದಾನದಲ್ಲಿ ಉತ್ಸಾಹದಿಂದ ಆಡಿ ಪಂದ್ಯವನ್ನು ಗೆಲ್ಲಬೇಕೆಂದರೆ ಮೈದಾನದಲ್ಲಿ ಒಳ್ಳೆಯ ವಾತಾವರಣ ಕೂಡ ತುಂಬಾ ಮುಖ್ಯವಾಗುತ್ತದೆ.

READ ON APP